ಚಿಕ್ಕಮಗಳೂರು: ಸಮಾಜದಲ್ಲಿನ ಜಾತಿ ವ್ಯವಸ್ಥೆ ವಿರುದ್ಧ ಗಟ್ಟಿಯಾಗಿ ದನಿ ಎತ್ತಿ. ತಮ್ಮ ಸರಳ ಕೀರ್ತನೆಗಳ ಮೂಲಕ ಸಮಸಮಾಜದ ಕನಸು ಬಿತ್ತಿದ ಮಹಾ ಮಾನವತಾವಾದಿ ದಾಸ ಶ್ರೇಷ್ಟ ಕನಕದಾಸರು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸ್ಮರಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಭಕ್ತ ಕನಕ ದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
೧೫-೧೬ನೇ ಶತಮಾನದಲ್ಲಿ ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದು. ಕೀರ್ತನೆಗಳನ್ನು ಜನಸಾಮಾನ್ಯರಿಗೆ ಅರ್ಥವಾಗುವಂತಹ ಸರಳವಾಗಿ ಕನ್ನಡ ಭಾಷೆಯಲ್ಲಿ ರಚಿಸಿ, ಸಂದೇಶಗಳು ಎಲ್ಲಾ ಕಾಲಘಟ್ಟಕ್ಕೂ ಸಲ್ಲುವಂತೆ ಮಾಡಿದ್ದಾರೆ. ಸಮಾನತೆ ಮತ್ತು ಸಹಬಾಳ್ವೆಯ ನೀತಿಯನ್ನು ತಮ್ಮ ಕೀರ್ತನೆಗಳಲ್ಲಿ ಸಾರಿದ ಮೇರು ವ್ಯಕ್ತಿ ಎಂದರು.
ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ. ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ರಾಮಧಾನ್ಯ ಚರಿತೆ, ಹರಿಭಕ್ತ ಸಾರ, ಮೋಹನ ತರಂಗಿಣಿ, ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿ ಆ ಮೂಲಕ ಸಮಾಜಕ್ಕೆ ಸಂದೇಶ ಸಾರಿದ್ದಾರೆ ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು ಎಂದು ಸ್ಮರಿಸಿದರು.
ಕಾಗಿನೆಲೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರವು ಪ್ರಾಧಿಕಾರವನ್ನು ರಚಿಸಿದೆ. ಜತೆಗೆ ಬಾಡ ಗ್ರಾಮವನ್ನು ಅಭಿವೃದ್ಧಿ ಪಡಿಸಿ ಸುಂದರ ಪ್ರವಾಸಿ ತಾಣವನ್ನಾಗಿಸಲು ಚಿಂತನೆ ನಡೆಸಿದೆ. ಇಂದಿನ ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕತೆ ಇದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ ಜನಸಾಮಾನ್ಯರು ಅರ್ಥೈಹಿಸಿಕೊಳ್ಳುವಂತೆ ಅತ್ಯಂತ ಸರಳ ಭಾಷೆಯಲ್ಲಿ ದಾಸ ಸಾಹಿತ್ಯದ ಕೀರ್ತನೆಗಳನ್ನು ರಚಿಸುವ ಮೂಲಕ ಮೌಲ್ಯಯುತ, ಸದೃಢ ಸಮಾಜವನ್ನು ಕಟ್ಟುವಲ್ಲಿ ಸಂತ ಕನಕದಾಸರ ಕೊಡುಗೆ ಅಪಾರ.
ಸಮಾಜದಲ್ಲಿ ಬಡವರು, ಶ್ರೀಮಂತರ ನಡುವಿನ ಅಸಮಾನತೆ ಕುರಿತು ರಾಮಧಾನ್ಯ ಚರಿತೆ ಕೃತಿಯಲ್ಲಿ ಅಕ್ಕಿ- ರಾಗಿಯನ್ನು ದೃಷ್ಟಾಂತದ ಮೂಲಕ ಅತ್ಯಂತ ಮನೋಜ್ಞವಾಗಿ ವಿವರಿಸಿ ಸಮಾನತೆಯ ಸಂದೇಶವನ್ನು ಸಾರಿದ್ದಾರೆ. ಜಾತಿ, ಮೇಲು-ಕೀಳು ಎನ್ನದೆ ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಕೀರ್ತನೆ, ಸಾಹಿತ್ಯದ ಮೂಲಕ ತೋರಿಸಿಕೊಟ್ಟಿದ್ದಾರೆ ಅವರ ಚಿಂತನೆ, ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಆಶಯಗಳನ್ನು ಈಡೇರಿಸಬೇಕು ಎಂದರು.
ಸಮಾಜದ ಮುಖಂಡ ಪುಟ್ಟೇಗೌಡ ಮಾತನಾಡಿ ಕನಕದಾಸರ ಸಂದೇಶಗಳು ಲೋಕಮಾನ್ಯವಾದವುಗಳು, ಅವರೊಬ್ಬ ದಂಡನಾಯಕನಾಗಿದ್ದರೂವೈರಾಗ್ಯ ತಳೆದು ಬಡವರಿಗೆ ದಾನ ಧರ್ಮ ಮಾಡುವ ಮಾಡಿ ಶ್ರೇಷ್ಟ ಸಂತರಾದರು. ನಾಡಿಗೆ ಕೊಡುಗೆ ನೀಡಿದ ಮಹಾಪುರುಷರ ಜಯಂತಿ ಆಚರಣೆ ಮೂಲಕ ಅವರ ತತ್ವ ಆದಶಗಳು ಮನುಕುಲಕ್ಕೆ ದಾರಿ ದೀಪವಾಗಲಿದೆ ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್, ಅಪರ ಜಿಲ್ಲಾಧಿಕಾರಿ ರೂಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ಸಮಾಜದ ಮುಖಂಡರಾದ ಎ.ಎನ್.ಮಹೇಶ್, ಬೆಳವಾಡಿ ರವೀಂದ್ರ, ಪುಟ್ಟೇಗೌಡ, ಸೇರಿದಂತೆ ಮತ್ತಿತರರು ಇದ್ದರು.
ಇದನ್ನೂ ಓದಿ:
Kanakadasa jayanthi : ಸಮಾಜದ ಅಂಕುಡೊಂಡು ತಿದ್ದಿದ ಮಹಾಸಂತ ಕನಕದಾಸರು
Discussion about this post