ಚಿಕ್ಕಮಗಳೂರು : ದೇಶದ ಪ್ರತಿಯೊಬ್ಬ ನಾಗರೀಕನಿಗೂ ಸಮಾನತೆ ಕಲ್ಪಿಸುವ ಏಕತೆಯನ್ನು ಸಾರುವಲ್ಲಿ ಭಾರತ ಸಂವಿಧಾನವು ಅತ್ಯಂತ ಶ್ರೇಷ್ಟ ಗ್ರಂಥವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್. ಅಭಿಪ್ರಾಯಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಬಸವನಹಳ್ಳಿಯ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಸಂವಿಧಾನವು ದೇಶದ ಜನತೆಗೆ ಕಾನೂನಿನ ಮೂಲಕ ಒದಗಿಸಿರುವ ಹಕ್ಕು, ಕರ್ತವ್ಯ, ಸಮಾನತೆ ಅಂಶಗಳು, ಸಂವಿಧಾನದ ಮಹತ್ವ ಹಾಗೂ ದೇಶದ ಏಕತೆಗೆ ಇರುವ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಥಾಮಸ್ ಅವರು ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲ ದಯಾನಂದ ಜೆ.ಎಸ್. ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ಪಿ. ಕಚೇರಿ ಕಾನೂನು ಅಧಿಕಾರಿ ರಾಘವೇಂದ್ರ ರಾಯ್ಕರ್, ಉಪನ್ಯಾಸಕ ಸುರೇಶ್ ಹೆಚ್.ಡಿ. ಉಪಸ್ಥಿತರಿದ್ದರು.
ಇದನ್ನೂ ಓದಿ:
The Constitution : ಬಿ.ಆರ್.ಅಂಬೇಡ್ಕರ್ ಆಶಯ ಈಡೇರಿಸಲು ದೇಶದಲ್ಲಿ ಸಂವಿಧಾನ ಯಥಾವತ್ತಾಗಿ ಜಾರಿಯಾಗಲಿ
Discussion about this post