• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಾಹಿತ್ಯ

ಖ್ಯಾತ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ: ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಸಂತಾಪ

ತೆಂಕುತಿಟ್ಟು ಯಕ್ಷರಂಗದ ಅಗ್ರ ಪಂಕ್ತಿಯ, ಗಾನಗಂಧರ್ವ ಖ್ಯಾತಿಯ ಹಿರಿಯ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ (66) ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

Shri News Desk by Shri News Desk
Oct 12, 2021, 07:25 pm IST
in ಸಾಹಿತ್ಯ
Padyana Ganapathi Bhatt

ಪದ್ಯಾಣ ಗಣಪತಿ ಭಟ್ (ಚಿತ್ರ ಕೃಪೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್)

Share on FacebookShare on TwitterTelegram

ಮಂಗಳೂರು: ತೆಂಕುತಿಟ್ಟು ಯಕ್ಷರಂಗದ ಅಗ್ರ ಪಂಕ್ತಿಯ, ಗಾನಗಂಧರ್ವ ಖ್ಯಾತಿಯ ಹಿರಿಯ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ (66) ಮಂಗಳವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಮಡ್ಕದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ತಿಂಗಳುಗಳ ಹಿಂದೆ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಅದರಿಂದ ಗುಣಮುಖರಾಗಿದ್ದ ಅವರು ನ್ಯುಮೋನಿಯಾಕ್ಕೂ ಒಳಗಾಗಿದ್ದರು. ಬಳಿಕ ಹೃದಯಸಂಬಂಧಿ ಕಾಯಿಲೆಯ ಕಾರಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಗುಣಮುಖರಾಗಿ ಮನೆಗೆ ಮರಳಿದ್ದರು. ಮಂಗಳವಾರ ಬೆಳಿಗ್ಗೆ ಅವರಿಗೆ ದಿಡೀರ್ ಹೃದಯಾಘಾತವಾಗಿದೆ.

ಗಣಪತಿ ಭಟ್ಟರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಓದಿ: ದೀಪಾ ಹಿರೇಗುತ್ತಿ – ಮಮತಾ ಅರಸೀಕೆರೆಗೆ ಮಯೂರ ವರ್ಮ ಪ್ರಶಸ್ತಿ ಗರಿ

ಕಲಾವಿದರಿಂದಲೇ ಕೂಡಿದ ಪದ್ಯಾಣ ಮನೆತನದ ತಿರುಮಲೇಶ್ವರ ಭಟ್ಟ ಮತ್ತು ಸಾವಿತ್ರಿ ದಂಪತಿಯ ಮೂರನೇ ಪುತ್ರನಾಗಿ ಸಾವಿರ 1955ರಲ್ಲಿ ಜನಿಸಿದ ಗಣಪತಿ ಭಟ್ಟರು ತಮ್ಮ ಅಜ್ಜ ಪುಟ್ಟು ನಾರಾಯಣ ಭಾಗವತರಿಂದ ಭಾಗವತಿಕೆಯ ಪ್ರಾಥಮಿಕ ಪಾಠ ಹೇಳಿಸಿಕೊಂಡಿದ್ದರು. ಬಳಿಕ ಮಾಂಬಾಡಿ ನಾರಾಯಣ ಭಾಗವತರಲ್ಲಿ ಹೆಚ್ಚಿನ ಅಭ್ಯಾಸ ಮಾಡಿದ್ದರು.

ಸುರತ್ಕಲ್ ಮೇಳದಲ್ಲಿ ಯಕ್ಷರಂಗದ ಬೀಷ್ಮ ಡಾ. ಶೇಣಿ ಗೋಪಾಲಕೃಷ್ಣ ಭಟ್ಟ, ಮಲ್ಪೆ ಶಂಕರನಾರಾಯಣ ಸಾಮಗ, ತೆಕ್ಕಟ್ಟೆ ಆನಂದ ಮಾಸ್ತರ್, ಕುಂಬಳೆ ಸುಂದರರಾವ್ ಮೊದಲಾದ ಹಿರಿಯ ಕಲಾವಿದರ ಒಡನಾಟದಲ್ಲಿ ಮೆರೆದಿದ್ದರು. ನೂರಾರು ಯಕ್ಷಗಾನ ಪ್ರದರ್ಶನಗಳನ್ನು ಮೆರೆಯಿಸಿದ್ದರು. 16ನೇ ವಯಸ್ಸಿನಲ್ಲೇ ವೃತ್ತಿಪರ ಭಾಗವತಿಕೆ ಆರಂಭಿಸಿದ್ದ ಭಟ್ಟರು ಸುರತ್ಕಲ್ ಮಾತ್ರವಲ್ಲದೆ, ಕರ್ನಾಟಕ, ಎಡನೀರು, ಹೊಸನಗರ, ಹನುಮಗಿರಿ ಸೇರಿದಂತೆ ಹಲವು ಮೇಳಗಳಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು. ಶೇಣಿ ಗೋಪಾಲಕೃಷ್ಣ ಭಟ್ಟರ ನೆಚ್ಚಿನ ಭಾಗವತರಾಗಿದ್ದರು ಎಂಬುದು ಗಣಪತಿ ಭಟ್ಟರ ಹೆಗ್ಗಳಿಕೆ.

ಅಭಿಮಾನಿಗಳೇ ನಡೆಸಿದ ‘ಪದ್ಯಾಣ ಪದ ಯಾನ’ ಎಂಬ ಅಭಿನಂದನಾ ಕಾರ್ಯಕ್ರಮ, ಅಭಿನಂದನಾ ಗ್ರಂಥ ಸೇರಿದಂತೆ ಹಲವಾರು ಪ್ರಶಸ್ತಿ ಸನ್ಮಾನಗಳಿಗೆ ಅವರು ಭಾಜನರಾಗಿದ್ದಾರೆ.

ಓದಿ: ಮಗುವಿನ ಲಿಂಗ ಬಹಿರಂಗಪಡಿಸಲು ವಿಡಿಯೋದಲ್ಲಿ ಹುಲಿಯನ್ನು ಬಳಸಿಕೊಂಡ ದಂಪತಿ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

‘ಈ ಟಿವಿ’ ವಾಹಿನಿಯ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರೊಂದಿಗೆ ತೀರ್ಪುಗಾರರಾಗಿ ಭಾಗವಹಿಸಿದ ಯಕ್ಷಗಾನದ ಭಾಗವತ ಎಂಬ ಕೀರ್ತಿಯೂ ಗಣಪತಿ ಭಟ್ಟರದ್ದಾಗಿದೆ.

ಬೊಮ್ಮಾಯಿ, ಶೋಭಾ ಕರಂದ್ಲಾಜೆ ಸೇರಿ ಗಣ್ಯರಿಂದ ಸಂತಾಪ

ಭಾಗವತ ಗಣಪತಿ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವ ಅರವಿಂದ ಲಿಂಬಾವಳಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೇರಿದಂತೆ ಹಲವಾರು ಮಂದಿ ಸಂತಾಪ ಸೂಚಿಸಿದ್ದಾರೆ.

‘ಯಕ್ಷಗಾನ ಕಲಾ ಕ್ಷೇತ್ರದಲ್ಲಿ ತಮ್ಮ ಕಂಚಿನ ಕಂಠದಿಂದ ಜನಮೆಚ್ಚಿದ ಭಾಗವತರಾದ ಪದ್ಯಾಣ ಗಣಪತಿ ಭಟ್ ಅವರ ಅಗಲಿಕೆಯಿಂದ ಸಾಂಸ್ಕೃತಿಕ ರಂಗಕ್ಕೆ ಭರಿಸಲಾರದ ನಷ್ಟವಾಗಿದೆ. ನಾಲ್ಕು ದಶಕಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪದ್ಯಾಣ ಗಣಪತಿ ಭಟ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಯಕ್ಷಗಾನ ಕಲಾ ಕ್ಷೇತ್ರದಲ್ಲಿ ತಮ್ಮ ಕಂಚಿನ ಕಂಠದಿಂದ ಜನಮೆಚ್ಚಿದ ಭಾಗವತರಾದ ಶ್ರೀ ಪದ್ಯಾಣ ಗಣಪತಿ ಭಟ್ ರವರ ಅಗಲಿಕೆಯಿಂದ ಸಾಂಸ್ಕೃತಿಕ ರಂಗಕ್ಕೆ ಭರಿಸಲಾರದ ನಷ್ಟವಾಗಿದೆ. ನಾಲ್ಕು ದಶಕಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಶ್ರೀ ಪದ್ಯಾಣ ಗಣಪತಿ ಭಟ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. pic.twitter.com/O7xBme6ass

— Basavaraj S Bommai (@BSBommai) October 12, 2021


‘ತೆಂಕುತಿಟ್ಟಿನ ಯಕ್ಷಗಾನದ ಜನಮೆಚ್ಚಿದ ಭಾಗವತರಾದ, ಗಾನಗಂಧರ್ವ ಶ್ರೀ ಪದ್ಯಾಣ ಗಣಪತಿ ಭಟ್ ಅವರ ಅಗಲಿಕೆ ಸುದ್ದಿ ಅತೀವ ದುಃಖವನ್ನು ತಂದಿದೆ. ತಮ್ಮ ಕಂಚಿನ ಕಂಠದ ಮೂಲಕ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದ ಶ್ರೀಯುತರ ಅಗಲಿಕೆ ಯಕ್ಷಗಾನ ಕ್ಷೇತ್ರಕ್ಕೇ ತುಂಬಲಾರದ ನಷ್ಟ. ಭಗವಂತನು ಅವರಿಗೆ ಸದ್ಗತಿ ಕರುಣಿಸಲಿ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.

ತೆಂಕುತಿಟ್ಟಿನ ಯಕ್ಷಗಾನದ ಜನಮೆಚ್ಚಿದ ಭಾಗವತರಾದ, ಗಾನಗಂಧರ್ವ ಶ್ರೀ ಪದ್ಯಾಣ ಗಣಪತಿ ಭಟ್ ಅವರ ಅಗಲಿಕೆ ಸುದ್ದಿ ಅತೀವ ದುಃಖವನ್ನು ತಂದಿದೆ.

ತಮ್ಮ ಕಂಚಿನ ಕಂಠದ ಮೂಲಕ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದ ಶ್ರೀಯುತರ ಅಗಲಿಕೆ ಯಕ್ಷಗಾನ ಕ್ಷೇತ್ರಕ್ಕೇ ತುಂಬಲಾರದ ನಷ್ಟ.

ಭಗವಂತನು ಅವರಿಗೆ ಸದ್ಗತಿ ಕರುಣಿಸಲಿ. pic.twitter.com/oqqZi9JqI7

— Shobha Karandlaje (@ShobhaBJP) October 12, 2021


‘ಯಕ್ಷಗಾನ ಭಾಗವತಿಕೆಯ ಗಾನಗಂಧರ್ವ ಎಂದು ಹೆಸರಾಗಿದ್ದ ಹಿರಿಯ ಭಾಗವತರಾದ ಪದ್ಯಾಣ ಗಣಪತಿ ಭಟ್ ಅವರು ಇಹಲೋಕ ತ್ಯಜಿಸಿದ್ದು, ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಯಕ್ಷಗಾನ ಕಲಾ ಜಗತ್ತಿಗೆ ಅವರ ಕೊಡುಗೆ ಅಪಾರ. ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಅದ್ಭುತ ಪ್ರತಿಭೆಯ ಕಲಾವಿದನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂಬುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವ ಅರವಿಂದ ಲಿಂಬಾವಳಿ ಟ್ವೀಟ್ ಮಾಡಿದ್ದಾರೆ.

ಯಕ್ಷಗಾನ ಭಾಗವತಿಕೆಯ ಗಾನಗಂಧರ್ವ ಎಂದು ಹೆಸರಾಗಿದ್ದ ಹಿರಿಯ ಭಾಗವತರಾದ ಶ್ರೀ ಪದ್ಯಾಣ ಗಣಪತಿ ಭಟ್ ಅವರು ಇಹಲೋಕ ತ್ಯಜಿಸಿದ್ದು, ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
(1/2) pic.twitter.com/6mTbFFeRCY

— Aravind Limbavali (@ArvindLBJP) October 12, 2021


Tags: Death newsTOP NEWSYakshagana
ShareSendTweetShare
Join us on:

Related Posts

ಮೊಗೆದಷ್ಟೂ ಬೆರಗು : ಅಣ್ಣನ ನೆನಪಿನಲ್ಲಿ ತೇಜಸ್ವೀ ಮಿನುಗು!

ಮೊಗೆದಷ್ಟೂ ಬೆರಗು : ಅಣ್ಣನ ನೆನಪಿನಲ್ಲಿ ತೇಜಸ್ವೀ ಮಿನುಗು!

ಕುವೆಂಪು ಭಾವಲಹರಿಯಲ್ಲಿ: ಕನ್ನಡವೇ ಸತ್ಯ !

ಕುವೆಂಪು ಭಾವಲಹರಿಯಲ್ಲಿ: ಕನ್ನಡವೇ ಸತ್ಯ !

Keshava Reddy Handrala

ಕೇಶವ ರೆಡ್ಡಿ ಹಂದ್ರಾಳರ ಹೊಸ ಕಥಾ ಸಂಕಲನ ಸೋನಾಗಾಚಿಗೆ ಆರ್‌ ಡಿ ಹೆಗಡೆ ಆಲ್ಮನೆ ಬರೆದ ಮುನ್ನುಡಿ

Opinions

Opinion: ನಾವು ನಡುಪಂಥೀಯರಲ್ಲ, ನೇರಪಂಥೀಯರು: ಕಥೆಗಾರ ಮಧು ವೈಎನ್

ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

ಸಂತಕವಿ ದಾರ್ಶನಿಕ ಭಕ್ತ ಕನಕದಾಸರು: ಕನ್ನಡ ಸಾಹಿತ್ಯ ಸಿರಿಪದಕದ ಅಮೂಲ್ಯ ಹೆಸರು!

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In