ಚಿಕ್ಕಮಗಳೂರು: ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯನ್ನು ಗೆಲ್ಲುವ ಆತ್ಮವಿಶ್ವಾಸವಿದೆ ಎಂದು ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿಸೆಂಬರ್ ೧೦ ಕ್ಕೆ ವಿಧಾನ ಪರಿಷತ್ ಚುನಾವಣೆ ನಿಗಧಿಯಾಗಿದೆ. ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ. ನಾನೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು ಪಕ್ಷದ ತೀರ್ಮಾನದಂತೆ ಯಾವುದೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಲ್ಲಿ ಗೆಲ್ಲಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಪಕ್ಷದ ಸೂಚನೆಯಂತೆ ನಡೆದುಕೊಳ್ಳಲಾಗುವುದು ಮತ್ತೊಮ್ಮೆ ಸ್ಪರ್ಧಿಸುವಂತೆ ಸೂಚಿಸಿ ಅವಕಾಶ ನೀಡಿದ್ದಲ್ಲಿ ಅದಕ್ಕೂ ಸಿದ್ದ. ತಾನು ಪರಿಷತ್ ಸದಸ್ಯನಾಗಿ ೬ ವರ್ಷಗಳ ಕಾಲ ನಡೆಸಿದ ಕೆಲಸ ಆತ್ಮತೃಪ್ತಿ ತಂದಿದೆ. ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳಿದ್ದು ಎಲ್ಲವನ್ನು ಬಗೆಹರಿಸಲು ಸಾಧ್ಯವಾಗಿಲ್ಲ, ಪರಿಷತ್ ಸದಸ್ಯರ ಇತಿಮಿತಿಯಲ್ಲಿ ಕೆಲಸ ಮಾಡಲಾಗಿದೆ, ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಾಗಿದೆ ಎಂದರು.
ಗ್ರಾಮಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿಗಳ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗಿದೆ ಅದರ ಆತ್ಮ ತೃಪ್ತಿ ನನಗಿದೆ. ಈ ಬಾರಿಯ ಪರಿಷತ್ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲಿದ್ದು ಕಾರ್ಯಕರ್ತರ ಬಲದೊಂದಿಗೆ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಇದೊಂದು ರಾಜಕೀಯ ಪ್ರೇರಿತವಾಗಿದ್ದು, ಆಡಳಿತ ಪಕ್ಷದವರ ಮೇಲೆ ಈ ರೀತಿಯ ಆರೋಪಗಳು ಸಾಮಾನ್ಯ, ಸತ್ಯಾಸತ್ಯತೆಯ ಬಗ್ಗೆ ತನಿಖೆಯಾಗಬೇಕು. ಇದರಲ್ಲಿ ರಾಜಕೀಯ ದುರುದ್ದೇಶವಿದೆ ಎಂದು ಆರೋಪಿಸಿದರು.
Legislative Council: ಕರ್ನಾಟಕ ವಿಧಾನ ಪರಿಷತ್ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ
Discussion about this post