ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆಗಳಿAದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ೬೦೦ ಕ್ಕೂ ಅಧಿಕ ಮತಗಳ ಅಂತರದಿAದ ಗೆಲ್ಲುವ ವಿಶ್ವಾಸವಿದೆ ಎಂದು ಭಾರತೀಯ ಜನತಾ ಪಾರ್ಟಿ ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಪತ್ರಿಕಾಗೋಷ್ಟಿ ಮೂಲಕ ಮಾತನಾಡಿದ ಅವರು ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್ ಸಮಸ್ಯೆಯನ್ನು ಮನಗಂಡು ಪಂಚಾಯಿತಿಗಳಿಗೆ ಜನರೇಟರ್ ನೀಡಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಿಂದ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು ರಸ್ತೆ, ದೇವಸ್ಥಾನ, ಸಮುದಾಯ ಭವನ, ಹಾಸ್ಟೆಲ್ ದುರಸ್ಥಿ, ಚೆಕ್ಡ್ಯಾಂ, ನೀರಾವರಿ ಯೋಜನೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಯೋಜನೆಗಳಿಗೆ ಸಂಸದರು ಮತ್ತು ಶಾಸಕರ ಜೊತೆಗೂಡಿ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನ ತರುವಲ್ಲಿ ಹಾಗೂ ಅಧ್ಯಕ್ಷರ, ಉಪಾಧ್ಯಕ್ಷರ ಹಾಗೂ ಸದಸ್ಯರ ವೇತನವನ್ನು ಹೆಚ್ಚಿಸುವಂತೆ ಸರ್ಕಾರವನ್ನು ಆಗ್ರಹಿಸುವ ಮೂಲಕ ಪಂಚಾಯಿತಿ ಸದಸ್ಯರ ಕಷ್ಟಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಬಂದಿದ್ದಾರೆ. ಗ್ರಾಮ ಪಂಚಾಯತಿ ಅಭಿವೃದ್ಧಿಯಾದರೆ ರಾಜ್ಯವು ಅಭಿವೃದ್ಧಿಯಾಗುತ್ತದೆ ಎಂದು ನಂಬಿರುವ ಅವರು, ಗ್ರಾಮ ಪಂಚಾಯತಿಗಳಲ್ಲಿ ಅನುಷ್ಟಾನಗೊಳಿಸುವ ಎಲ್ಲಾ ಯೋಜನೆಗಳನ್ನು ಜನರಿಗೆ ತಲುಪಿಸಲು ಹಾಗೂ ಗ್ರಾಮಗಳ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪಿ.ಡಿ.ಓಗಳ ಹುದ್ದೆಯನ್ನು ಉನ್ನತಿಕರಿಸುವಂತೆ ಸದನದಲ್ಲಿ ಒತ್ತಾಯಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಅತಿವೃಷ್ಟಿ ಮತ್ತು ಅನಾವೃಷ್ಟಿ ಹಾಗೂ ಆನೆಗಳ ಹಾವಳಿಯಿಂದ ಆಗುತ್ತಿರುವ ಬೆಳೆಗಳ ನಾಶ ಮತ್ತು ಮೃತಪಟ್ಟ ಸಂತ್ರಸ್ಥ ಕುಟುಂಬಗಳಿಗೆ ಸದನದಲ್ಲಿ ಚರ್ಚಿಸಿ ಸರ್ಕಾರದಿಂದ ಸಕಾಲಕ್ಕೆ ಪರಿಹಾರ ಒದಗಿಸುವ ಕಾರ್ಯ ಮಾಡಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ೯೪ಸಿ ಮತ್ತು ೯೪ಸಿಸಿ ಅರ್ಜಿಗಳನ್ನು ಇತ್ಯರ್ಥ ಮಾಡದೇ ಇರುವುದನ್ನು ಮನಗೊಂಡು, ಸದನದಲ್ಲಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಶೀಘ್ರವಾಗಿ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಮಾಡಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸುವಂತೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.
೨೦೧೭ರಲ್ಲಿ ಸತತ ಬರಗಾಲದಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆದ ಘಟನೆಗಳನ್ನು ಹಾಗೂ ಜಿಲ್ಲೆಯ ರೈತರ, ಕಾಫಿ ಬೆಳೆಗಾರರ, ಅಡಿಕೆ ಬೆಳೆಗಾರರ ಮತ್ತು ಇತರೆ ಕೃಷಿಕರ ಪರವಾಗಿ ಅವರುಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವAತೆ ರೈತರ ಪರವಾಗಿ ಸದನದಲ್ಲಿ ದ್ವನಿ ಎತ್ತಿದ್ದಾರೆ. ಕಳಸ ತಾಲ್ಲೂಕು ಮಾಡಬೇಕೆಂದು ಒತ್ತಾಯಿಸಿ ಕಳಸದಿಂದ ಮೂಡಿಗೆರೆ ತನಕ ಪಾದಯಾತ್ರೆ ಮಾಡಿ ಸರ್ಕಾರದ ಗಮನ ಸೆಳೆದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಳಸವನ್ನು ತಾಲ್ಲೂಕಾಗಿ ಘೋಷಣೆ ಮಾಡಲಾಯಿತು ರಾಜ್ಯದಲ್ಲಿ “ಗೋ ಹತ್ಯೆ ನಿಷೇಧಕಾಯ್ದೆ”ಯ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.
ಮಲೆನಾಡಿನ ಆಟೋ ಚಾಲಕರಿಗೆ ಪರ್ಮಿಟ್ ಸಮಸ್ಯೆಗೆ ಪರಿಹಾರ, ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾರ್ಯದಲ್ಲಿ ಶಾಸಕರು ಹಾಗೂ ಸಂಸದರ ಜೊತೆಗೂಡಿ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ. ಭದ್ರ ಜಲಾಶಯದಿಂದ ಕಡೂರು, ತರೀಕೆರೆ, ಚಿಕ್ಕಮಗಳೂರು ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ೧೨೦೦ ಕೋಟಿ ಅನುದಾನ ತಂದು ಕೆರೆ ತುಂಬಿಸುವ ಯೋಜನೆಯಲ್ಲಿ ಇವರ ಪಾತ್ರವೂ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ತರ ಯೋಜನೆಯಾದ ಪ್ರತಿ ಗ್ರಾಮಗಳ ಮನೆಗಳಿಗೆ ಕುಡಿಯುವ ನೀರಿನ “ಜಲ ಜೀವನ ಮಿಷನ್” ಯೋಜನೆ ಅಡಿಯಲ್ಲಿ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸ್ ಇಲಾಖೆಯ ಸಿಬ್ಬಂದಿಗಳ ವೇತನ ಹೆಚ್ಚಿಸಲು “ಔರಾದ್ಕರ್ ವರದಿ” ಜಾರಿ, ಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳಿಗೆ “ಶ್ರೀ ಸಿದ್ದಗಂಗಾ ವಿದ್ಯಾ ಪ್ರಶಸ್ತಿ” ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಿಸುಮಾರು ೬೦೦೦ ಗ್ರಂಥಪಾಲಕರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಸತತ ೪ ವರ್ಷಗಳ ಕಾಲ ಸದನದಲ್ಲಿ ಧ್ವನಿಯಾಗಿರುವ ಪರಿಣಾಮ ರಾಜ್ಯದ ಎಲ್ಲಾ ಗ್ರಂಥ ಪಾಲಕರಿಗೆ ರೂ. ೪೦೦೦ ದಿಂದ ರೂ.೧೨,೫೦೦ ವರೆಗೆ ವೇತನವನ್ನು ಹೆಚ್ಚಿಸಿದ್ದು ಸರ್ಕಾರದ ಗಮನ ಸೆಳೆದು, ಅದನ್ನು ಸಫಲಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.
ಜನರ ಆರೋಗ್ಯ ವ್ಯವಸ್ಥೆಗಳು, ಶೈಕ್ಷಣಿಕ ಬಲವರ್ಧನೆಗಾಗಿ ಕ್ರಮಗಳು, ವಿದ್ಯುತ್ ಪೂರೈಕೆಯ ಸುವ್ಯವಸ್ಥೆಗಳು, ಆರ್ಥಿಕ ಕ್ಷೇತ್ರದ ಬಲವರ್ಧನೆಗಾಗಿ ವಿವಿಧ ಬ್ಯಾಂಕ್ಗಳ ಸ್ಥಾಪನೆ, ಜಿಲ್ಲೆಯಲ್ಲಿರುವ ಪ್ರವಾಸೋದ್ಯಮ ಸ್ಥಳಗಳ ಅಭಿವೃದ್ಧಿ ಕಾರ್ಯಕ್ರಮಗಳು, ಸಮಗ್ರ ಸರ್ಕಾರದ ಆಡಳಿತ ವ್ಯವಸ್ಥೆಗಳಲ್ಲಿನÀ ಸುಧಾರಣೆ ಮತ್ತು ಅಭಿವೃದ್ದಿ ಯೋಜನೆಗಳನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಾಗಿದ್ದು ಆ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವAತೆ ಮನವಿ ಮಾಡಿದರು.
ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ ಮಾತನಾಡಿ ಜಿಲ್ಲೆಯ ೨೨೧ ಗ್ರಾಮಪಂಚಾಯಿತಿಗಳಲ್ಲಿ ೨೯ ನ್ನು ಹೊರತುಪಡಿಸಿ ಉಳಿದ ಎಲ್ಲಾ ಗ್ರಾಮಪಂಚಾಯಿತಿಗಳಿಗೆ ಗುಣಮಟ್ಟದ ಜನರೇಟರ್ ನೀಡುವ ಮೂಲಕ ಜನತೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈಗಾಗಲೇ ಬಹುತೇಕ ಗ್ರಾಮಪಂಚಾಯಿತಿಗಳಿಗೆ ಪ್ರಾಣೇಶ್ ಪರವಾಗಿ ಕ್ಷೇತ್ರ ಪ್ರವಾಸ ಮಾಡಿದ್ದು ೧೪೦೦ ಕ್ಕೂ ಹೆಚ್ಚು ಬಿಜೆಪಿ ಬೆಂಬಲಿತರು ಸಂಪರ್ಕದಲ್ಲಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ಪ್ರಾಣೇಶ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್, ತಾ.ಪಂ ಮಾಜಿ ಅಧ್ಯಕ್ಷ ಕನಕರಾಜ್, ರಂಗನಾಥ್, ಉಪಸ್ಥಿತರಿದ್ದರು.
Mk Pranesh wins
Discussion about this post