ಬೆಂಗಳೂರು: ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.
ಜ್ಞಾನ ಭಾರತಿ ಕ್ಯಾಂಪಸ್ ನಲ್ಲಿ ಯೂನಿವರ್ಸಿಟಿ ಕ್ಯಾಂಪಸ್ ನಿರ್ಮಿಸಲಾಗಿದೆ. ಡಿಸೆಂಬರ್ 6ರಂದು ಪ್ರಧಾನಿಯವರು ಲೋಕಾರ್ಪಣೆ ಮಾಡಲಿದ್ದಾರೆ.
ಈ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. ಸಚಿವರಾದ ವಿ. ಸೋಮಣ್ಣ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ್ ಗುಪ್ತ, ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ ಡಾ.ಭಾನುಮೂರ್ತಿ ಉಪಸ್ಥಿತರಿದ್ದರು.
Narendra Modi
Discussion about this post