ಚಿಕ್ಕಮಗಳೂರು: ಕೋವಿಡ್ ರೂಪಾಂತರಿ ಓಮಿಕ್ರಾನ್ ವೈರಸ್ ಬಗ್ಗೆ ಜನತೆ ಹೆಚ್ಚು ಮುಂಜಾಗ್ರತೆ ವಹಿಸುವಂತೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸೀಮಾ ಸಲಹೆ ನೀಡಿದರು.
ನಗರದ ಒಕ್ಕಲಿಗ ಸಮುದಾಯ ಭವನದಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಲಾಕ್ಡೌನ್ ತುರ್ತು ಸಂದರ್ಭದಲ್ಲಿ ದೇಶದ ಜನತೆ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು ಜತೆಗೆ ೨ನೇ ಅಲೆಯಲ್ಲಿ ಅಜಾರೂಕತೆ ತೋರಿದ ಪರಿಣಾಮ ಕೊರೋನಾ ಸೋಂಕು ಉಲ್ಭಣಗೊಂಡು ಹೆಚ್ಚು ಜನರು ಜೀವತೆರಬೇಕಾಯಿತು, ಇದೀU ಮೂರನೇ ಅಲೆಯಲ್ಲಿ ಕೋವಿಡ್ ರೂಪಾಂತರಿ ವೈರಸ್ ಒಮಿಕ್ರಾನ ಹರಡುವ ಭೀತಿ ಇದ್ದು ಜನತೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು, ಹೆಚ್ಚು ಜನಸಂದಣಿ ಸೇರದೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಿದರು.
ಸೋಮಕಿನ ಬಗ್ಗೆ ಜನತೆ ನಿರ್ಲಕ್ಷ್ಯವಹಿಸದೆ ಕಡ್ಡಾಯವಾಗಿ ಲಸಿಕಾ ಕೇಂದ್ರಗಳಿಗೆ ತೆರಳಿಗೆ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು. ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಸ್ಥಳೀಯ ಆರೋಗ್ಯಾಧಿಕಾರಿಗಳಿಂದ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ತಿಳಿಸಿದರು.
೨ನೇ ಅಲೆಯಲ್ಲಿ ನಗರ ಪ್ರದೇಶ ಒಳಗೊಂಡಂತೆ ಗ್ರಾಮೀಣ ಭಾಗದಲ್ಲಿ ಸೋಂಕಿನ ತೀವ್ರತೆ ಅಧಿಕವಾಗಿದ್ದು ಅಪಾರ ಸಾವು ನೋವುಗಳು ಸಂಭವಿಸಿದ್ದು ಇದು ಎಚ್ಚರಿಕೆ ನೀಡಿದ್ದು ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಮಕ್ಕಳು ಹಾಗೂ ಕುಟುಂಬದ ಬಗ್ಗೆ ಜಾಗರೂಕತೆ ವಹಿಸುವಂತೆ ತಿಳಿಸಿದರು.
ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ಅಧ್ಯಕ್ಷೆ ಸವಿತಾರಮೇಶ್ ಮಾತನಾಡಿ ಒಕ್ಕಲಿಗ ಸಮುದಾಯದಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಮುಂಚೂಣಿಗೆ ಬರಬೇಕು ಆ ನಿಟ್ಟಿನಲ್ಲಿ ಸಂಘವು ವಿವಿಧ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಲ್ಲರೂ ಉತ್ಸಾಹದಿಂದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು. ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮಹಿಳೆಯರು ಸಬಲರಾಗಬೇಕು ಎನ್ನುವ ಉದ್ದೇಶದಿಂದ ಸಂಘವು ಹಲವು ವಿಧದಲ್ಲಿ ಸೇವಾ ಕಾರ್ಯಗಳನ್ನು ರೂಪಿಸುತ್ತಿದ್ದು ಸದಸ್ಯರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಕೋವಿಡ್ ತುರ್ತು ಸಂದರ್ಭದಲ್ಲಿ ಮಹಿಳಾ ಸಂಘವು ಹಲವು ವಿಧದಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ನೆರವು ನೀಡಿದ್ದು ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್, ಆಹಾರದ ಕಿಟ್ ವಿತರಣೆ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಗಳಿಗೆ ಎಲ್ಲಾ ಸದಸ್ಯರ ಬೆಂಬಲ ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಎ.ರಾಜೇಗೌಡ, ಉಪಾಧ್ಯಕ್ಷ ಎಸ್.ಡಿ. ಮನೋಜ್, ಗೌರವ ಕಾರ್ಯದರ್ಶಿ ಉಮೇಶ್ಚಂದ್ರ, ಮಹಿಳಾ ಸಂಘದ ಉಪಾಧ್ಯಕ್ಷೆ ಸ್ಮಿತಾಸುರೇಶ್, ಗೌರವಕಾರ್ಯದರ್ಶಿ ಜಾಹ್ನವಿಜಯರಾಂ, ಸಹಕಾರ್ಯದರ್ಶಿ ಶಿಲ್ಪವಿಜಯ್, ನಿರ್ದೇಶಕರಾದ ಶಾಲಿನಿ ಸುಬ್ರಹ್ಮಣ್ಯ, ನಾಗರತ್ನಜಗದೀಶ್, ಸುಭದ್ರನಾರಾಯಣ್, ಸಿ.ಎಆರ್. ಮಂಜುಳಾಮಂಜುನಾಥ್ಗೌಡ, ಕೃಷ್ಣವೇಣಿರಮೇಶ್, ಭಾಗ್ಯಮಹೇಂದ್ರ, ಅಂಜನಿರವಿ, ವೇದಾಶ್ರೀಸತೀಶ್, ಸಂಧ್ಯಾನಾಗೇಶ್, ಚಂಪಾಸುದರ್ಶನ್, ಅನ್ವಿತಾಚರಣ್, ನಿಕಟಪೂರ್ವ ಅಧ್ಯಕ್ಷೆ ಸ್ಮಿತಾಸುನೀಲ್ ,ಸಾಧ್ವಿ ಮಧುಸೂದನ್, ಸೇರಿದಂತೆ ಉಪಸ್ಥಿತರಿದ್ದರು.
Omykron virus
Discussion about this post