ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪದ್ಮಶ್ರೀ ಪುರಸ್ಕಾರ ಪಡೆದು ದೆಹಲಿಯಿಂದ ಬೆಂಗಳೂರಿಗೆ ಮರಳಿದ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪುಟ್ಟ ಗ್ರಾಮ ಹೊನ್ನಳ್ಳಿಯ ತುಳಸಿ ಗೌಡ ಅವರನ್ನು ಸ್ವಾಗತಿಸಲಾಯಿತು. ಪುರಸ್ಕಾರ ಪಡೆದು ಮರಳಿದ ಅವರ ಜೊತೆ ಸೆಲ್ಪೀ ತೆಗೆದುಕೊಳ್ಳಲು ನೂರಾರು ಜನರು ಮುಗಿಬಿದ್ದಿದ್ದರು. ಸ್ಟಾರ್ ನಟರಿಗೆ ಸಿಗುವುದಕ್ಕಿಂತ ಹೆಚ್ಚು ವೈಭವದ ಸ್ವಾಗತ ಪದ್ಮಶ್ರೀ ತುಳಸಿ ಗೌಡ ಅವರಿಗೆ ದೊರೆಯಿತು.
ಪದ್ಮಶ್ರೀ ಪುರಸ್ಕೃತರಾಗುತ್ತಿದ್ದಂತೆ ತುಳಸಿ ಗೌಡರಿಗೆ ಸಾಲು ಸಾಲು ಕಾರ್ಯಕ್ರಮಕ್ಕೆ ಹಾಜರಾಗಲು ಆಮಂತ್ರಣ ಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಎಲ್ಲಪ್ಪ ರೆಡ್ಡಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂರು ತುಳಸಿ ಗಿಡವನ್ನು ಸ್ಥಳೀಯರಿಗೆ ಹಂಚುವ ಕಾರ್ಯಕ್ರಮ ನಿಗದಿಯಾಗಿದೆ. ಬೆಂಗಳೂರಿನಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದಲ್ಲಿ ಡಾ.ನಿರ್ಮಲಾನಂದನಾಥ ಮಹಾಸ್ವಾಮಿ ಅವರೊಂದಿಗೆ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಶನಿವಾರ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮ ಆಯೋಜಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವೇಳೆ ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ತುಳಸಿ ಗೌಡರನ್ನು ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ರೈತರು, ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ
Discussion about this post