ಮುಂಬೈ: ‘ಪನಾಮಾ ಪೇಪರ್ಸ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ನ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ಸೋಮವಾರ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಹಾಜರಾದರು.
ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ತೆರಳಿದ ಅವರು ಹೇಳಿಕೆ ದಾಖಲಿಸಿದರು.
ಇದಕ್ಕೂ ಮುನ್ನ ಸೋಮವಾರ ಬೆಳಿಗ್ಗೆ ಇ.ಡಿ. ಅಧಿಕಾರಿಗಳು ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಿದ್ದರು. ಜತೆಗೆ, ತನಿಖೆಗೆ ಸಹಕರಿಸದಿದ್ದರೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆಯನ್ನೂ ನೀಡಿದ್ದರು. ಈಗಾಗಲೇ ಎರಡು ಬಾರಿ ಸಮನ್ಸ್ ನೀಡಲಾಗಿದ್ದರೂ ಐಶ್ವರ್ಯಾ ವಿಚಾರಣೆಗೆ ಹಾಜರಾಗಿರಲಿಲ್ಲ.
ಇದನ್ನೂ ಓದಿ: ಕನ್ನಡದಲ್ಲೂ ನಟಿಸ್ತೀನಿ- ರಶ್ಮಿಕಾ ಮಂದಣ್ಣ
2016ರ ‘ಪನಾಮಾ ಪೇಪರ್ಸ್’ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಳೆದ ಕೆಲವು ವರ್ಷಗಳಿಂದ ತನಿಖೆ ನಡೆಸುತ್ತಿದೆ.
ಪನಾಮಾ ಪೇಪರ್ಸ್ 2016ರಲ್ಲಿ ಹಣಕಾಸು ಅಕ್ರಮಕ್ಕೆ ಸಂಬಂಧಿಸಿ ಬಹಿರಂಗ ಪಡಿಸಿದ್ದ ಪಟ್ಟಿಯಲ್ಲಿ ಐಶ್ವರ್ಯಾ ರೈ ಹೆಸರೂ ಉಲ್ಲೇಖವಾಗಿತ್ತು. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ಉಲ್ಲಂಘಿಸಿ ವಿದೇಶದಲ್ಲಿ ಸಂಪತ್ತು ಸಂಗ್ರಹಿಸಲಾಗಿದೆ ಎಂಬ ಆರೋಪ ಅವರ ಮೇಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯರ ಮೇಲಿನ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.
ಇನ್ನಷ್ಟು ಸುದ್ದಿಗಳು…
Brahmastra: ರಣಬೀರ್ ಕಪೂರ್, ಆಲಿಯಾ ಭಟ್ ಜೋಡಿಯ ಬ್ರಹ್ಮಾಸ್ತ್ರ ಮೋಷನ್ ಪೋಸ್ಟರ್ನಲ್ಲಿ ವಿಶೇಷವೇನಿದೆ?
ನಟಿಯರಾದ ಕರೀನಾ ಕಪೂರ್, ಅಮೃತಾ ಅರೋರಾ ಸೇರಿ ಬಾಲಿವುಡ್ನ ನಾಲ್ವರಿಗೆ ಕೋವಿಡ್
Discussion about this post