ಚಿಕ್ಕಮಗಳೂರು: ವಿಧಾನ ಪರಿಷತ್ತಿನ 6 ವರ್ಷದ ಅಧಿಕಾರವಧಿಯಲ್ಲಿ ನನ್ನ ಮೇಲೆ ಯಾವುದೇ ಭ್ರಷ್ಟಾಚಾರ, ವರ್ಗಾವಣೆ, ಅಧಿಕಾರಿಗಳ ವಿರುದ್ಧ ದರ್ಪ ತೋರಿದ ಪ್ರಸಂಗಗಳಿದ್ದಲ್ಲಿ ಅವುಗಳನ್ನು ಸಾಕ್ಷಿ, ದಾಖಲೆ ಸಮೇತ ಕಾಂಗ್ರೆಸ್ ಪಕ್ಷ ಸಾಬೀತು ಪಡಿಸಿದ್ದಲ್ಲಿ ರಾಜಕೀಯದಿಂದಲೇ ಸ್ವಯಂ ನಿವೃತ್ತಿ ಪಡೆಯಲು ಸಿದ್ದನಿದ್ದೇನೆ ಎಂದು ವಿಧಾನ ಪರಿಷತ್ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಸವಾಲು ಹಾಕಿದರು.
ಡಿಸೆಂಬರ್ ೧೦ ರಂದು ನಡೆಯಲಿರುವ ಪರಿಷತ್ ಚುನಾವಣೆಗೆ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿದ್ದು ಬಹುತೇಕ ಕಡೆ ಬಿಜೆಪಿ ಪರ ಗೆಲುವಿಗೆ ಪೂರಕ ವಾತವರಣವಿದೆ. ಜಿಲ್ಲೆಯಲ್ಲಿ ೧೫೦೦ ಕ್ಕೂ ಹೆಚ್ಚು ಮಂದಿ ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯರುಗಳಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಭಿವೃದ್ಧಿ ಸಾಧನೆಗಳು ಜತೆಗೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ನಾನು ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ತಿನ ಸದಸ್ಯನಾಗಿ ೬ ವರ್ಷದ ಅವಧಿಯಲ್ಲಿ ಮತ ನೀಡಿದ ಯಾರೊಬ್ಬರಿಗೂ ಚ್ಯುತಿಬಾರದಂತೆ ನಡೆದುಕೊಂಡಿದ್ದೇನೆ. ಯಾರಿಬ್ಬರಿಗೂ ಅಗೌರವ ತೋರಿಲ್ಲ. ಅಧಿಕಾರಿಗಳ ವರ್ಗಾವಣೆ, ಭ್ರಷ್ಟಾಚಾರದಲ್ಲಿ ತೊಡಗಿಲ್ಲ ಈ ಬಗ್ಗೆ ಕಾಂಗ್ರೆಸ್ ಸುಳ್ಳು ಆಪಾದನೆ ಮಾಡಿ ನನ್ನ ತೇಜೋವಧೆಗೆ ಯತ್ನಿಸುತ್ತಿದೆ. ನನ್ನ ಮೇಲಿನ ಆರೋಪಗಳನ್ನು ಸಾಕ್ಷಿ ದಾಖಲೆ ಸಮೇತ ಸಾಬೀತುಪಡಿಸಿದ್ದೇ ಆದ್ದಲ್ಲಿ ರಾಜಕೀಯದಿಂದಲೇ ಸ್ವಯಂ ನಿವೃತ್ತಿಗೆ ಸಿದ್ದನಿದ್ದೇನೆ ಎಂದು ಸವಾಲು ಹಾಕಿದರು.
ಜಿಲ್ಲೆಯ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಜಿಲ್ಲೆಯ ಗ್ರಾಮಪಂಚಾಯಿತಿಗಳಿಗೆ ಸರ್ಕಾರಿ ಸಂಸ್ಥೆ ಕೆ.ಆರ್.ಐ.ಡಿ.ಎಲ್ನಿಂದ ೧೯೬ ಉತೃಷ್ಟ ಕಂಪನಿಯಿಂದ ಗುಣಮಟ್ಟದ ಜನರೇಟರ್ಗಳನ್ನು ಖರೀದಿ ಮಾಡಿ ನೀಡಲಾಗಿದೆ. ಪರಿಷತ್ತಿನಲ್ಲಿ ಸ್ಥಳೀಯ ಸಂಸ್ಥೆಗಳು, ಗ್ರಾಮಪಂಚಾಯಿತಿ ಪರವಾಗಿ ಯಾವೆಲ್ಲ ಚರ್ಚೆ ಮಾಡಿದ್ದೇನೆ ಎಂಬುದನ್ನು ಮೊದಲು ತಿಳಿಯಲಿ ಎಂದರು.
ಬಿಜೆಪಿ ಅವಧಿಯಲ್ಲಿ ಗ್ರಾಮಪಂಚಾಯಿತಿ ಸದಸ್ಯರಿಗೆ ಗೌರವ ಧನ ನೀಡುವ ಜತೆಗೆ ೨೫೦ ರಿಂದ ೫೦೦ ಕ್ಕೆ ಹೆಚ್ಚಳ ಮಾಡಿದ್ದು ಬಿಜೆಪಿ ಅವಧಿಯಲ್ಲಿ ಇದೀಗ ಬಹುತೇಕ ಸದಸ್ಯರು ಆರ್ಥಿಕವಾಗಿ ಹಿಂದುಳಿದಿದ್ದು ಗೌರವಧನ ಹೆಚ್ಚಳ ಮಾಡಬೇಕು ಎನ್ನುವುದರಲ್ಲಿ ತಪ್ಪೇನಿದೆ. ಇದು ರಾಜಕಾರಣ ಉದ್ದೇಶಕ್ಕೆ ಹೇಳಿಕೆ ನೀಡಿಲ್ಲ ಕಾಂಗ್ರೆಸ್ ಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವ ಬದಲು ತಮ್ಮ ಅವಧಿಯಲ್ಲಿ ಜಿಲ್ಲೆಗೆ ಕೊಡುಗೆ ಏನು ಎಂಬುದನ್ನು ಜನತೆಗೆ ಸಾಬೀತು ಪಡಿಸಲಿ ಎಂದರು.
ಕೇಂದ್ರ ಕೃಷಿ ಸಚಿವೆ ಶೋಭಾಕರಂದ್ಲಾಜೆ ಮಾತನಾಡಿ ರಾಜ್ಯದ ೨೦ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡುತ್ತಿದ್ದು ಬಹುತೇಕ ಕಡೆಗಳಲ್ಲಿ ಬಿಜೆಪಿ ಪರವಾದ ವಾತವರಣವಿದೆ ಜಿಲ್ಲೆಯ ೨೪೬೮ ಗ್ರಾ.ಪಂ ಸದಸ್ಯರಲ್ಲಿ ೧೫೦೦ ಕ್ಕೂ ಹೆಚ್ಚು ಸದಸ್ಯರು ಬೆಂಬಲವಿದೆ ಇದು ಶೃಂಗೇರಿ, ಎನ್,ಆರ್ಪುರ, ಮುಂತಾದ ಕಡೆಗಳಲ್ಲಿ ನಡೆದ ಮತದಾರರ ಸಮಾವೇಶದಲ್ಲಿ ಹೆಚ್ಚು ಮಂದಿ ಸದಸ್ಯರು ಭಾಗವಹಿಸುವ ಮೂಲಕ ಸಾಬೀತಾಗಿದೆ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಪ್ರಾಣೇಶ್ ಹೆಚ್ಚು ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಡಳಿತವಾಧಿಯಲ್ಲಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಕೇಂದ್ರಿಯ ವಿಶ್ವವಿದ್ಯಾಲಯ, ನೀರಾವರಿ, ರಸ್ತೆ, ಕುಡಿಯುವ ನೀರು, ಯೋಜನೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯದಿಂದ ಹೆಚ್ಚು ಅನುದಾನ ತಂದು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಆದರೆ ಕಾಂಗ್ರೆಸ್ ೧೦ ವರ್ಷ ಆಡಳಿತದಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ತಮ್ಮ ಅವಧಿಯಲ್ಲಿ ಜಿಲ್ಲೆಗೆ, ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಲಿ ನರೇಂದ್ರ ಮೋದಿಯವರು ೧೩ನೇ ಹಣಕಾಸು ಯೋಜನೆಯಲ್ಲಿ ವಿದ್ಯುದ್ಧೀಕರಣ, ಶೌಚಾಲಯ ನಿರ್ಮಾಣ,ಕಸ ವಿಲೇವಾರಿ ಸೇರಿದಂತೆ ಹಲವು ಕಾರ್ಯಗಳಿಗೆ ಅನುದಾನ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ಜನಬಲದಿಂದ ಚುನಾವಣೆ ಎದುರಿಸಲು ಮುಂದಾದರೆ ಕಾಂಗ್ರೆಸ್ ಹಣಬಲದಿಂದ ಸದಸ್ಯರನ್ನು ಖರೀದಿ ಮಾಡಿ ಚುನಾವಣೆಗೆ ಮುಂದಾಗಿದೆ ಎಂದು ದೂಷಿಸಿದ ಅವರು ಜಿಲ್ಲೆಯ ಈ ಹಿಂದಿನ ಪರಿಷತ್ ಸದಸ್ಯರಂತೆ ಪ್ರಾಣೇಶ್ ಅವರು ಯಾವುದೇ ಅಧಿಕಾರಿಗಳನ್ನು ಪೀಡಿಸಿಲ್ಲ, ಭ್ರಷ್ಟಾಚಾರದ ಕಪ್ಪುಚುಕ್ಕೆ ಇವರ ಮೇಲಿಲ್ಲ ಎಂದು ಸಮರ್ಥಿಸಿಕೊಂಡರು.
ಪರಿಷತ್ ಚುನಾವಣೆ ಸಂಬಂಧ ಡಿಸೆಂಬರ್ ೦೩ ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಡೂರಿಗೆ ಮತ್ತು ತರೀಕೆರೆ ತಾಲ್ಲೂಕುಗಳಿಗೆ ಆಗಮಿಸಿ ಗ್ರಾ.ಪಂ ಸದಸ್ಯರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ ಕಲ್ಮರುಡಪ್ಪ, ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವರಾಜ್ಶೆಟ್ಟಿ, ವಕ್ತಾರ ವರಸಿದ್ದಿವೇಣುಗೋಪಾಲ್, ಕವಿತಾಶೇಖರ್, ದಿನೇಶ್, ಹೆಚ್,ಡಿ. ತಮ್ಮಯ್ಯ ಇದ್ದರು.
Discussion about this post