ಬೆಂಗಳೂರು : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ನವೆಂಬರ್ ಮೂರನೇ ವಾರದಲ್ಲಿ ಮೂರು ದಿನಗಳ ಕಾಲ 33 ನೇ ಅಖಿಲ ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ರಾಜ್ಯದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು, ವರದಿಗಾರರಿಗೆ, ಜನಪ್ರಿಯ ವಿಜ್ಞಾನ ಬರವಣಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದೆ. ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ 20 ರಿಂದ 45 ವರ್ಷದೊಳಗಿನ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ಚಿತ್ರ ನಿರೂಪಕರು, ವಿದ್ಯಾರ್ಥಿಗಳು, ಶಿಬಿರದಲ್ಲಿ ಭಾಗವಹಿಸಬಹುದಾಗಿದೆ.
ಶಿಬಿರವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಶ್ರೀ ಆದಿಚುಂಚನಗಿರಿ ಕ್ಷೇತ್ರ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆ -ಇಲ್ಲಿ ನಡೆಯಲಿದೆ. ಆಸಕ್ತರು ನವೆಂಬರ್ 15ರೊಳಗೆ ಹೆಸರುಗಳನ್ನು ನೊಂದಾಯಿಸಬೇಕಿದೆ.
ಸ್ವ ವಿವರಗಳೊಂದಿಗೆ ಒಂದು ಸ್ವರಚಿತ ಕನ್ನಡ ವೈಜ್ಞಾನಿಕ ಲೇಖನದ ಪ್ರತಿಯೊಂದಿಗೆ ಅರ್ಜಿಯನ್ನು ಗೌರವ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಭವನ, ನಂ.24/2, 21 ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-70 ಈ ವಿಳಾಸಕ್ಕೆ ಕಳುಹಿಸಬೇಕು. ಮೊಬೈಲ್: 99018 52150 ಇ-ಮೇಲ್ krvp.info@gmail.com
Discussion about this post