ಚಿಕ್ಕಮಗಳೂರು : ನಗರಸಭಾ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತೇಜುಕುಮಾರ್ ಅವರು ಅಕಾಲಿಕ ನಿಧನ ಹೊಂದಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಒಂದು ನಿಮಿಷ ಮೌನಾಚರಣೆ ಸಲ್ಲಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಎ.ಐ.ಸಿ.ಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಹಾಗೂ ವಿಧಾನ ಪರಿಷತ್ ಅಭ್ಯರ್ಥಿ ಎ.ವಿ.ಗಾಯತ್ರಿ ಶಾಂತೇಗೌಡ ಅವರು ತೇಜುಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡದ್ದನ್ನು ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಮತ್ತು ಸಮಾಜ ಸೇವೆ ಮಾಡುತ್ತಿದ್ದನ್ನು ನೆನಪಿಸಿಕೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ, ಮಾಜಿ ಸಚಿವ ಸಿ.ಆರ್.ಸಗೀರ್ ಅಹಮದ್, ಮಾಜಿ ಶಾಸಕ ಜಿ.ಹೆಚ್.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎ.ಎನ್.ಮಹೇಶ್, ರೇಖಾ ಹುಲಿಯಪ್ಪಗೌಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ, ಜಿಲ್ಲಾ ವಕ್ತಾರರಾದ ಹಿರೇಮಗಳೂರು ಪುಟ್ಟಸ್ವಾಮಿ, ರೂಬಿನ್ ಮೊಸಸ್, ಮುಖಂಡರಾದ ನಾಗರತ್ನ, ವನಮಾಲ ದೇವರಾಜ್, ಜಿಲ್ಲೆಯ ಬ್ಲಾಕ್ ಅಧ್ಯಕ್ಷರುಗಳು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
Discussion about this post