ಚಿಕ್ಕಮಗಳೂರು: ರಾಜ್ಯದಲ್ಲಿ ಗುತ್ತಿಗೆದಾರರಿಂದ ಕಮೀಷನ್ ಪಡೆಯುತ್ತಿರುವ ಬಗ್ಗೆ ಗುತ್ತಿಗೆದಾರರ ಸಂಘದಿಂದ ಪ್ರಧಾನಿಗೆ ಪತ್ರ ಬರೆದಿದ್ದು ಈ ಬಗ್ಗೆ ಸರ್ಕಾರ ಸ್ವತಂತ್ರ ಆಯೋಗ ರಚನೆ ಮಾಡಿ ಸೂಕ್ತ ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ಸೂಕ್ತ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.
International competition: ಗುಣಮಟ್ಟದ ಕಾಫಿ ತಯಾರಿಸುವ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆ
ನಗರದ ಖಾಸಗಿ ಹೋಟೆಲ್ವೊಂದರಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಜೆಪಿ ಸರ್ಕಾರಕ್ಕೆ ಜನತಂತ್ರ ಹಾಗೂ ಅಧಿಕಾರ ವಿಕೇಂದ್ರಿಕರಣದಲ್ಲಿ ನಂಬಿಕೆ ಹೊಂದಿಲ್ಲ ಚುನಾವಣೆ ನಡೆಸಲು ಬದ್ದತೆ ಇಲ್ಲದೇ ಜಿಲ್ಲಾ , ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಮುಂದೂಡಿದೆ. ಪ್ರಧಾನಿ ಮೋದಿಯವರು ೭ ವರ್ಷ ಆಡಳಿತ ನಡೆಸಿದ್ದಾರೆ ಆದರೆ ಇದುವರೆಗೂ ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಶಕ್ತಿ ತುಂಬುವ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ ಎಂದು ದೂಷಿಸಿದರು.
Winds against BJP: ರಾಜ್ಯದಲ್ಲಿ ಬಿಜೆಪಿ ವಿರುದ್ದದ ಗಾಳಿ ಬೀಸಲು ಪ್ರಾರಂಭ
ಸಂವಿಧಾನ ಸಾಮಾಜಿಕ ನ್ಯಾಯಕ್ಕೆ ವಿರುದ್ದವಾಗಿರುವ ಬಿಜೆಪಿ ಸರ್ಕಾರ ನರೇಗಾ ಯೋಜನೆಯಡಿ ಫಲಾನುಭವಿಗೆ ಸರಿಯಾಗಿ ವೇತನ ನೀಡಿಲ್ಲ, ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಮೋದಿ ಸರ್ಕಾರ ಸಾವಿರಾರು ಕೋಟಿ ಸಾಲ ಮಾಡಿ ಇದೀಗ ಕಾಂಗ್ರೆಸ್ ಅವಧಿಯ ಸಾಲ ಎಂದು ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ವಾಗ್ದಾಳಿ ಮಾಡಿದರು.
Karnataka Covid Guidelines ಓಮೈಕ್ರಾನ್: ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ರೈತವ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿ ಸುಮಾರು ೭೦೦ ರೈತರು ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಇದಕ್ಕೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದ ಅವರು, ಮುಂದಿನ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಅನೇಕ ರಾಜ್ಯಗಳ ಚುನಾವu ಸೋಲಿನ ಭಯದಿಂದ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಅಧಿಕಾರ ವಿಕೇಂದ್ರಿಕರಣಕ್ಕೆ ವಿರುದ್ದವಾಗಿರುವ ಸರ್ಕಾರಕ್ಕೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ ಇದೊಂದು ಭ್ರಷ್ಟ ಕಮಿಷನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
Radhe Shyam: ರಾಧೆ ಶ್ಯಾಮ್ ಚಿತ್ರದ ಕನ್ನಡ ಪ್ರೇಮಗೀತೆ, “ನಗುವಂತ ತಾರೆಯೇ”, ಇದೀಗ ಹೊರಬಂದಿದೆ!
ಸರ್ಕಾರದ ಕಾಮಗಾರಿಗಳಿಗೆ ೪೦ ಶೇ ಕಮಿಷನ್ ಪಡೆಯಲಾಗುತ್ತಿದೆ ಇದರಿಂದಾಗಿ ಗುಣಮಟ್ಟದ ಕಾಮಗಾರಿ ನಡೆಸಲು ಆಗುತ್ತಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದಿಂದ ಪ್ರಧಾನಿಗೆ ಪತ್ರ ಬರೆದಿದ್ದು ಈ ಬಗ್ಗೆ ಸ್ವತಂತ್ರ ಆಯೋಗ ರಚಿಸಿ ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
2024ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಲಕ್ಷಣ ಕಾಣುತ್ತಿಲ್ಲ: ಹಿರಿಯ ನಾಯಕ ಗುಲಾಂ ನಬಿ ಆಜಾದ್
ರಾಜ್ಯದ ೨೦ ಕ್ಷೇತ್ರಗಳಲ್ಲಿ ೧೫ ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ ಎಂದ ಅವರು ಚಿಕ್ಕಮಗಳೂರು ಕ್ಷೇತ್ರದಲ್ಲಿ ಗಾಯತ್ರಿ ಶಾಂತೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದು ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಜತೆಗೆ ಜನತೆಯೊಂದಿಗೆ ಉತ್ತಮ ಒಡನಾಟ ಹೊಂದಿ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ ಈ ನಿಟ್ಟಿನಲ್ಲಿ ಗಾಯತ್ರಿ ಅವರ ಗೆಲುವು ಶತಸಿದ್ದ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Convoy crash: ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ ಜಿಲ್ಲೆಯು ಪರಿಸರ, ರಾಜಕೀಯವಾಗಿ, ಸಾಮಾಜಿಕವಾಗಿ ಹಿನ್ನೆಲೆ ಹೊಂದಿದೆ. ಕಾಂಗ್ರೆಸ್ಗೆ ಇದು ತವರು ಮನೆಯಿಂದ್ದಂತೆ. ರಾಜ್ಯದಲ್ಲಿ ಆಡಳಿತ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕಮಿಷನ್ ದಂದೆ ನಡೆಸುತ್ತಿದೆ ಎಂದು ಆರೋಪಿಸಿದರು.
IND vs NZ Test: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ – ರಹಾನೆ, ಜಡೇಜಾ, ಇಶಾಂತ್ ಅಲಭ್ಯ
ಪಕ್ಷದ ಯತ್ನಾಳ್, ಹಾಗೂ ವಿಶ್ವನಾಥ್ ಗಂಭೀರವಾಗಿ ಆರೋಪ ಮಾಡಿದ್ದಾರೆ. ಗುತ್ತಿಗೆದಾರರ ಸಂಘವು ದೂರು ನೀಡಿದೆ ಎಂದರು. ಕೋವಿಡ್ ಸಂದರ್ಭದಲ್ಲಿ ಹಾಸಿಗೆ, ಔಷಧಿ, ಆಕ್ಸಿಜನ್ನಲ್ಲಿ ಕೋಟ್ಯಾಂತರ ದಂದೆ ನಡೆಸಿದೆ. ಎಂದು ದೂಷಿಸಿದ ಅವರು ಜಿಲ್ಲೆಯಲ್ಲಿ ಸೆರ್ಫಸಿ ಕಾಯ್ದೆ ಅಡಿ ಸಾಲದ ಹೆಸರಿನಲ್ಲಿ ರೈತರಿಗೆ ನೋಟಿಸ್ ನೀಡಿ ಕಿರುಕುಳ ನೀಡಲಾಗುತ್ತಿದೆ, ಈ ಬಗ್ಗೆ ಸಂಸದರು, ಶಾಸಕರು ಎಂದಾದರೂ ಪ್ರತಿಕ್ರಿಯಿಸಿದ್ದಾರಾ? ಅವರ ಸಮಸ್ಯೆಗೆ ಸ್ಪಂದಿಸಲು ಯತ್ನಿಸಿದ್ದಾರೆಯಾ ಎಂದು ಪ್ರಶ್ನಿಸಿದರು.
Request to make provision: ಸೇವಾ ಸಿಂಧು ಪೋರ್ಟಲ್ನಲ್ಲಿ ಶೈಕ್ಷಣಿಕ ಧನ ಸಹಾಯಕ್ಕೆ ಅವಕಾಶ ಕಲ್ಪಿಸಲು ಮನವಿ
ರಾಜ್ಯಕ್ಕೆ ಬದಲಾವಣೆ ಅನಿವಾರ್ಯವಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ನ್ನು ಬೆಂಬಲಿಸುವಂತೆ ಮನವಿ ಮಾಡಿದ ಅವರು, ದೇಶ ಹಾಗೂ ರಾಜ್ಯದ ಜನತೆಯ ಶಕ್ತಿಯಾಗಿ ಸೇವೆ ಮಾಡಲು ಅವಕಾಶ ನೀಡುವಂತೆ ಕೇಳೊಕೊಂಡರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ರಾಜ್ಯ ಕೆಪಿಸಿಸಿ ಮಾಧ್ಯಮ ವಕ್ತಾರ ಬಿ.ಎಲ್.ಶಂಕರ್. ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಸಗೀರ್ ಅಹ್ಮದ್, ಮುಖಂಡರಾದ ಎಂ.ಎಲ್,ಮೂರ್ತಿ, ಮಾಜಿ ಸಚಿವೆ ಮೋಟಮ್ಮ, ಮಾಜಿ ಶಾಸಕರಾದ ಶ್ರೀನಿವಾಸ್, ಎಸ್.ಎಂ.ನಾಗರಾಜ್, ಜಿ.ಪಂ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ರೇಖಾಹುಲಿಯಪ್ಪಗೌಡ, ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.
Booster licike: ರಾಜ್ಯದಲ್ಲಿ ಜನರಿಗೆ ಬೂಸ್ಟರ್ ಲಿಸಿಕೆ ಹಾಕಲು ಅನುಮತಿ ನೀಡಬೇಕು
Siddaramaiah demands setting up of independent commission and probe
Discussion about this post