ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೊರೋನಾ ದೃಢಪಟ್ಟಿದೆ. ಗಂಗೂಲಿ ಅವರನ್ನು ಚಿಕಿತ್ಸೆಗಾಗಿ ಕೊಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದೆ. ನಿನ್ನೆ ಅವರನ್ನು ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಯಿತು. ವರದಿಯಿಂದ ಪಾಸಿಟೀವ್ ಎಂದು ತಿಳಿದುಬಂತು. ಹೀಗಾಗಿ, ತಕ್ಷಣವೇ, ಗಂಗೂಲಿ ಅವರನ್ನು ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ ಒಂದು ವಾರಗಳಿಂದ ಇಡೀ ದೇಶದಲ್ಲಿ ಕೊರೋನ ರಣಕೇಕೆ ಹಾಕುತ್ತಿದೆ. ದೆಹಲಿ, ಮುಂಬೈನಲ್ಲಿ ಪರಿಸ್ಥಿತಿ ವೈರುದ್ಯವಾಗಿದೆ. ಅದರಲ್ಲೂ ಮುಂಬೈನಲ್ಲಿ ಹೊಸ ತಳಿ ಒಮಿಕ್ರಾನ್ ವೈರಾಣು ರಣವೇಗದಲ್ಲಿ ಹರಡುತ್ತಿರುವುದರ ಬಗ್ಗೆ ವರದಿಯಾಗಿದೆ.
ಗಂಗೂಲಿ ಆಸ್ಪತ್ರೆಗೆ ದಾಖಲಾಗಿರುವುದನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಖಚಿಪಡಿಸಿದೆ.
ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಕೂಡ ಹೊಸ ವೈರಾಣು ಒಮಿಕ್ರಾನ್ ನಿಂದಾಗಿ ಡೋಲಾಯಮಾನವಾಗಿತ್ತು. ಆದರೆ, ಎರಡೂ ದೇಶದ ಕ್ರಿಕೆಟ್ ಮಂಡಳಿಗಳು ಒಮ್ಮತ ನಿರ್ಧಾರಕ್ಕೆ ಬಂದಿದ್ದರಿಂದ ಮೊದಲ ಟೆಸ್ಟ್ ಆರಂಭವಾಗಿದೆ. ಈ ಸರಣಿ ನಂತರ ಏಕದಿನ ಕ್ರಿಕೆಟ್ ಗೆ ನಾಯಕ ಯಾರಾಗುತ್ತಾರೆ ಎನ್ನುವ ವಿಚಾರ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.
bn
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮೊದಲು ಕೋಹ್ಲಿ ಸುದ್ದಿಗೋಷ್ಠಿಯಲ್ಲಿ, ಒಂದೂವರೆ ಗಂಟೆ ಮೊದಲು ನನ್ನನ್ನು ನಾಯಕತ್ವದಿಂದ ಕೆಳಗೆ ಇಳಿಯುತ್ತೀರಾ ಎಂದು ಕೇಳಿದ್ದರು. ಯೋಚನೆ ಮಾಡಲು ಸಮಯ ಕೊಟ್ಟಿರಲಿಲ್ಲ ಎಂದೆಲ್ಲ ಹೇಳಿಕೆ ನೀಡಿದ್ದರು.
ಈ ವಿಚಾರವಾಗಿ ಗಂಗೂಲಿ, ತಾವು ವೈಯುಕ್ತಿಕವಾಗಿ ಕೋಹ್ಲಿಯನ್ನು ಟಿ.20 ನಾಯಕತ್ವದಿಂದ ಕೆಳಗೆ ಇಳಿಯದಂತೆ ಮನವಿ ಮಾಡಿದ್ದೆ ಎನ್ನುವ ತಮ್ಮಹಿಂದಿನ ಹೇಳಿಕೆಗೆ ಬದ್ಧರಾಗಿದ್ದರು. ಕೋಹ್ಲಿಯ ಆರೋಪಕ್ಕೆ ಯಾವುದೇ ಉತ್ತರ ನೀಡಿರಲಿಲ್ಲ.
ಈ ಮಧ್ಯೆ, ರೋಹಿತ್ ಶರ್ಮಾರ ಅನುಪಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ಪಂದ್ಯಗಳಿಗೆ ತಂಡದ ನಾಯಕತ್ವದ ಜವಾಬ್ದಾರಿಯನ್ನು ಕೆ.ಎಲ್ .ರಾಹುಲ್ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿ ಓಡಾಡುತ್ತಿದೆ. ಈ ಸಂದರ್ಭದಲ್ಲಿ, ಬಿಸಿಸಿಐ ಅಧ್ಯಕ್ಷ ಗಂಗೂಲಿ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಕೆಲ ತಿಂಗಳುಗಳ ಹಿಂದೆ ಹೃದಯದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಸ್ಟಂಟ್ ಅನ್ನು ಅವಳವಡಿಸಲಾಗಿತ್ತು. ಈಗ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್ ಸರಣಿ: ಕನ್ನಡಿಗ ರಾಹುಲ್ಗೆ ನಾಯಕತ್ವ ಸಾಧ್ಯತೆ
Discussion about this post