ಬೆಂಗಳೂರು: ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕರ್ನಾಟಕದ ಬಿಜೆಪಿ ಘಟಕವು ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕೆಲ ಗಂಭೀರ ಪ್ರಶ್ನೆಗಳನ್ನು ಹಾಕಿದ್ದು ಶಾಂತಿ-ಸೌಹಾರ್ದತೆಗಳಿಗೆ ಭಂಗ ತಂದು ಜನರ ನೆಮ್ಮದಿಗೆ ಭಂಗ ತರುವ ಉದ್ದೇಶದಿಂದ ಪ್ರತಿಪಕ್ಷ ಕಾಂಗ್ರೆಸ್ ಈ ರೀತಿಯ ಚಟುವಟಿಕೆಯಲ್ಲಿ ತೊಡಗಿದೆ ಎಂದು ಆರೋಪಿಸಿದೆ.
ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ “ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ” ಎಂದು ಸಿದ್ಧರಾಮಯ್ಯ ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ.
ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆಯಾಮಗಳಲ್ಲಿ ಅಪಪ್ರಚಾರದ ಸಂಚು ನಡೆಸುವುದಕ್ಕಾಗಿಯೇ ಕಾಂಗ್ರೆಸ್ ಬೆಳಗಾವಿ ಅಧಿವೇಶನದ ಸಮಯವನ್ನು ಬಳಸಿಕೊಳ್ಳುತ್ತಿದೆಯೇ?
ಹೌದು, ಮೊದಲ ದಿನದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಹಾಗೂ ಘಟನಾವಳಿಗಳು ಇದನ್ನೇ ಸೂಚಿಸುತ್ತಿವೆ.
ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು.
ಒಂದೊಮ್ಮೆ ನಾಡದ್ರೋಹಿ ಕಾಂಗ್ರೆಸ್ನ ಪ್ರಯತ್ನ ಸಫಲವಾಗಿ, ಕಾಂಗ್ರೆಸ್ ಕಾರ್ಯಕರ್ತರ ಮುಖವಾಡ ಧರಿಸಿ ಸಮಾಜಘಾತುಕರು ಗುಂಪಿನಲ್ಲಿ ಸೇರಿಸಿದ್ದರೆ ಅಧಿವೇಶನದ ಕತೆ ಏನಾಗುತ್ತಿತ್ತು?
ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಆಯೋಜಿಸಲಾಗಿತ್ತು.
ಆದರೆ ನಾಡದ್ರೋಹಿ ಕಾಂಗ್ರೆಸ್ ಒಂದು ದಿನವೂ ಕಲಾಪ ನಡೆಯುವುದಕ್ಕೂ ಅವಕಾಶ ನೀಡಲಿಲ್ಲ. ಪ್ರಶ್ನೋತ್ತರ ಕಲಾಪವನ್ನೂ ತಮ್ಮ ಪ್ರತಿಷ್ಠೆಗೆ ಬಲಿ ಪಡೆಯುವ ಪ್ರಯತ್ನ ಮಾಡಿದರು.
ಉತ್ತರ ಕರ್ನಾಟಕದ ಬಗ್ಗೆ ಅವರಿಗಿರುವ ಬದ್ಧತೆಯೇ ಪ್ರಶ್ನಾರ್ಹವಾಗಿದೆ. ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ನ ಮಿತ್ರಪಕ್ಷ ಎಂಇಎಸ್.
ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರೇ.
ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ನ ಉದ್ದೇಶವಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರವರೇ, ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ? ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ?
ಇದಕ್ಕೆ ಕಾಂಗ್ರೆಸ್ನಿಂದ ಏನು ಉತ್ತರ ಬರಲಿದೆಯೆಂದು ಕಾದು ನೋಡಬೇಕಾಗಿದೆ.
State BJP unit questions congress on its agenda to disturb peace in the state
ಇದನ್ನೂ ಓದಿ: video viral: ಸಿದ್ದರಾಮಯ್ಯ- ಸಿ.ಎಂ. ಇಬ್ರಾಹಿಂ ನಡುವೆ ಜಟಾಪಟಿ ನಡೆಯಿತೆ..?
ಇದನ್ನೂ ಓದಿ: ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ
Discussion about this post