ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಗೋ ಸಾಗಾಟ ವಿರುದ್ಧ ಕಠಿಣ ಕಾನೂನು ಜಾರಿಯಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ನಿರ್ದೇಶನ ನೀಡಲಾಗಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ, ತಿಳಿಸಿದ್ದಾರೆ.
ತೀರ್ಥಹಳ್ಳಿ ತಾಲೂಕು ಮೇಳಿಗೆ ಗ್ರಾಮ ದಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುವುದನ್ನು ತಡೆಯಲು, ಯತ್ನಿಸಿದ ಇಬ್ಬರು ಯುವಕರನ್ನ ಗೋ ಕಳ್ಳರು ತೀವ್ರವಾಗಿ ಗಾಯಗೊಳಿಸಿ ಪರಾರಿಯಾದ ಘಟನೆ ಕುರಿತು ಪ್ರತಿಕ್ರಿಯಿಸಿ, ಆರೋಪಿಗಳನ್ನು ಬಂಧಿಸಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲು, ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವಿಷಯವನ್ನು ತಿಳಿದು, ಘಟನೆಯಲ್ಲಿ ಗಾಯಗೊಂಡ ಇಬ್ಬರು ಯುವಕರ ಚಿಕಿತ್ಸೆಗೆ ಮಣಿಪಾಲದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
ಮೇಳಿಗೆ ಗ್ರಾಮದಿಂದ ಪಿಕ್ ಅಪ್ ವಾಹನದಲ್ಲಿ ದನಗಳನ್ನು ಕೊಂಡೊಯುತ್ತಿದ್ದ ಆರೋಪಿಗಳನ್ನು ತಡೆಯಲು ಯತ್ನಿಸಿದ, ಕಿರಣ್ (23) ಮತ್ತು ಚರಣ್ (24) ಮೇಲೆ ವಾಹನ ಚಲಾಯಿಸಲು ಯತ್ನಿಸಿದ ದುಷ್ಕರ್ಮಿಗಳು ನಂತರ ಪರಾರಿಯಾಗಿದ್ದರು.
ಗಾಯಗೊಂಡ ಇಬ್ಬರೂ ಯುವಕರನ್ನು ತಕ್ಷಣ ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಗೆ ಸೇರಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಆಸ್ಪತ್ರೆಗೆ ಧಾವಿಸಿ, ಯುವಕರನ್ನು ಸಂತೈಸಿದ್ದಲ್ಲದೆ, ಸೂಕ್ತ ಚಿಕಿತ್ಸೆ ದೊರಕಿಸಲೂ ಜ್ನಾನೇಂದ್ರ ನೆರವಾಗಿದ್ದಾರೆ.
Stringent law against illegal cow movement in the state
Discussion about this post