ಚಿಕ್ಕಮಗಳೂರು : ತನ್ನ ಸಾವಿಗೆ ತನ್ನ ಪಕ್ಷದ ಮುಖಂಡರು ಕಾರಣವೇಂದು ಸ್ಟೇಟಸ್ ಹಾಕಿ ಪಟ್ಟಣ ಪಂಚಾಯಿತಿ ಸದಸ್ಯೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಎನ್.ಆರ್.ಪುರ ಪಟ್ಟಣದಲ್ಲಿ ನಡೆದಿದೆ.
ಅಧ್ಯಕ್ಷೆ ಸ್ಥಾನ ಬಿಟ್ಟುಕೊಡದಿದ್ದ ಕಾರಣಕ್ಕೆ ನರಸಿಂಹರಾಜಪುರ ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ 5-6 ಬಗೆಯ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಾತುಕತೆಯಂತೆ ಪ್ರಸ್ತುತ ಅಧ್ಯಕ್ಷೆಯಾಗಿರುವ ಸುರಯ್ಯಾ ಭಾನು ಅವಧಿ ಮುಗಿದಿದ್ದರೂ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಮೀನಾಮೇಷ ಎಣಿಸಿದ್ದರು. ಸುರಯ್ಯಾಭಾನು ಅವಧಿ ಮುಗಿದಿದ್ದರೂ ಪಕ್ಷದ ಮುಖಂಡರಲ್ಲೇ ಮುಸುಕಿನ ಗುದ್ದಾಟವಿತ್ತು ಎನ್ನಲಾಗಿದೆ.
ಇದರಿಂದಾಗಿ ಮನನೊಂದು ಸದಸ್ಯೆ ಜುಬೇದಾ ನಿದ್ರೆ ಮಾತ್ರೆ ಸೇವಿಸಿ ಈ ಕೃತ್ಯಕ್ಕೆ ಮುಂದಾಗಿದ್ದಾರೆ. ಎನ್.ಆರ್.ಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
Discussion about this post