Political News: ನಂದಿನಿ ಸಂಸ್ಥೆ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಪ್ರಾಯೋಜಕತ್ವ ಪಡೆದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ( CM Siddaramaiah) ಸಂತಸ ವ್ಯಕ್ತಪಡಿಸಿದ್ದಾರೆ.
ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್(D.K.Shivakumar) ಸಹ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ಇದು ರಾಜ್ಯದ ಜನತೆ ಹೆಮ್ಮೆ ಪಡುವ ಸುದ್ದಿ! ಕೋಟ್ಯಂತರ ಜನರ ನಂಬಿಕೆಯ ʼಬ್ರ್ಯಾಂಡ್ʼ ಆಗಿರುವ ನಮ್ಮ ನಂದಿನಿ ಲೋಗೋ T20 ವಿಶ್ವಕಪ್ನಲ್ಲಿ ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಜರ್ಸಿ ಮೇಲೆ ರಾರಾಜಿಸಲಿದೆ. ಕನ್ನಡಿಗರು ಹಾಗೂ ಕರ್ನಾಟಕದ ರೈತರು ಕಟ್ಟಿ ಬೆಳೆಸಿರುವ ನಂದಿನಿ ಬ್ರ್ಯಾಂಡ್ ಹೊಸ ಎತ್ತರ ತಲುಪುತ್ತಿರುವುದು ಖುಷಿ ಹಾಗೂ ಹೆಮ್ಮೆಯ ಸಂಗತಿ. ಗೋವಿನಿಂದ ಗ್ರಾಹಕರವರೆಗೂ ಗುಣಮಟ್ಟದ ಉತ್ಕೃಷ್ಟತೆ ಕಾಪಾಡುತ್ತಾ ಬಂದಿರುವ ನಮ್ಮ ನಂದಿನಿಗೆ ಹೇಳೋಣ ಚೀರ್ಸ್ ಎಂದು ಟ್ವೀಟ್ ಮಾಡಿದ್ದಾರೆ.
Spiritual: ಈ ದೇವಸ್ಥಾನಕ್ಕೆ ಭೇಟಿ ಕೊಟ್ಟವರಿಗೆ ಎಂದೂ ಸೋಲಿಲ್ಲ.. ಸೆಲೆಬ್ರಿಟಿ, ರಾಜಕಾರಣಿಗಳ ನೆಚ್ಚಿನ ದೇವರೀತ..
ಸೊಕ್ಕಿನ ಮಾತನ್ನಾಡಿದ್ದ ವಿದೇಶಿ ಉದ್ಯಮಿಗೆ ರತನ್ ಕೊಟ್ಟ ತಿರುಗೇಟು ಎಂಥದ್ದು..? ಟಾಟಾ ಜೀವನದ ರೋಚಕ ಕಥೆ
National News: ಕುರ್ಕುರೆ ತಂದಿಲ್ಲವೆಂದು ಗಂಡನಿಗೆ ಡಿವೋರ್ಸ್ ಕೊಡಲು ಮುಂದಾದ ಪತ್ನಿ
Discussion about this post