ನವದೆಹಲಿ: ಏಕದಿನ ಮಾದರಿಯ ಕ್ರಿಕೆಟ್ನಲ್ಲಿ ಟೀಂ ಇಂಡಿಯಾದ ನಾಯಕನಾಗಿ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡುವುದಕ್ಕೂ ಮುನ್ನ ನಾಯಕತ್ವ ತ್ಯಜಿಸಲು ವಿರಾಟ್ ಕೊಹ್ಲಿ ಅವರಿಗೆ ಗಡುವು ನೀಡಲಾಗಿತ್ತೇ? ಹೀಗೊಂದು ಚರ್ಚೆ ಈಗ ಕ್ರಿಕೆಟ್ ವಲಯದಲ್ಲಿ ಆರಂಭವಾಗಿದೆ.
ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಏಕದಿನ ಕ್ರಿಕೆಟ್ನಲ್ಲಿ ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಬುಧವಾರ ಘೋಷಿಸಿತ್ತು. ಆದರೆ ಇದಕ್ಕೂ ಮುನ್ನ, ನಾಯಕತ್ವ ತ್ಯಜಿಸಲು ಕೊಹ್ಲಿ ಅವರಿಗೆ 48 ಗಂಟೆಗಳ ಗಡುವು ನೀಡಿತ್ತು ಎಂದು ಮೂಲಗಳು ಹೇಳಿವೆ. ಆದರೆ ಅವರು ಅದಕ್ಕೆ ಸಮ್ಮತಿ ಸೂಚಿಸಿರಲಿಲ್ಲ. ಹೀಗಾಗಿ ಬಿಸಿಸಿಐ ಮುಂದಿನ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
ಓದಿ: ಏಕದಿನ ಕ್ರಿಕೆಟ್: ಟೀಂ ಇಂಡಿಯಾಗೆ ಕನ್ನಡಿಗ ಕೆ.ಎಲ್.ರಾಹುಲ್ ಉಪನಾಯಕ?
ಯುಎಇ ಯಲ್ಲಿ ನಡೆದ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಳಿಕ ಈ ಮಾದರಿಯ ಕ್ರಿಕೆಟ್ನಲ್ಲಿ ಭಾರತ ತಂಡದ ನಾಯಕತ್ವವನ್ನು ಬಿಟ್ಟುಕೊಡುವುದಾಗಿ ವಿರಾಟ್ ಕೊಹ್ಲಿ ತಿಳಿಸಿದ್ದರು. ಎಲ್ಲ ಮಾದರಿಯ ಕ್ರಿಕೆಟ್ನಲ್ಲಿ ನಾಯಕತ್ವ ವಹಿಸುವುದರಿಂದ ಬ್ಯಾಟಿಂಗ್ ಬಗ್ಗೆ ಗಮನ ಹರಿಸಲು ಕಷ್ಟವಾಗುತ್ತದೆ. ಹೀಗಾಗಿ ನಾಯಕತ್ವ ತ್ಯಜಿಸುವುದಾಗಿ ಅವರು ಹೇಳಿದ್ದರು. ಆದರೆ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ನಲ್ಲಿ ತಂಡದ ನಾಯಕತ್ವದಲ್ಲಿ ಮುಂದುವರಿಯುವ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ.
ವಿಶ್ವಕಪ್ ನಂತರ ಭಾರತದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟ್ವೆಂಟಿ-20 ಕ್ರಿಕೆಟ್ ಸರಣಿಯಲ್ಲಿ ತಂಡದ ನೇತೃತ್ವವನ್ನು ರೋಹಿತ್ ಶರ್ಮಾ ವಹಿಸಿದ್ದರು.
ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಏಕದಿನ ಕ್ರಿಕೆಟ್ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದ ಬಿಸಿಸಿಐ, ವಿರಾಟ್ ಕೊಹ್ಲಿ ಬಗ್ಗೆ ಉಲ್ಲೇಖವನ್ನೇ ಮಾಡಿರಲಿಲ್ಲ. ಅವರಾಗಿಯೇ ನಾಯಕತ್ವ ತ್ಯಜಿಸಿದ್ದಾರೆಯೇ ಅಥವಾ ಅವರನ್ನು ನಾಯಕ ಸ್ಥಾನದಿಂದ ವಜಾಗೊಳಿಸಲಾಗಿದೆಯೇ ಎಂಬುದನ್ನು ಸ್ಪಷ್ಟಪಡಿಸಿಲ್ಲ.
ಇನ್ನಷ್ಟು ಸುದ್ದಿಗಳು…
ಟ್ವೆಂಟಿ–20 ಆಯ್ತು, ಇನ್ನು ಏಕದಿನ ಕ್ರಿಕೆಟ್ಗೂ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕ
ಒಮಿಕ್ರಾನ್ ಭೀತಿ ಮಧ್ಯೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದೆ ಟೀಂ ಇಂಡಿಯಾ: ಸಿಎಸ್ಎ
Discussion about this post