ದುಬೈ: ದುಬೈ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದ ವೇಳೆ ಈ ಬೆಳವಣಿಗೆಯಾಗಿದೆ. ನಡೆದ ಸಭೆಯ ವೇಳೆ ಭಾರತ ರಾಷ್ಟ್ರೀಯ ಪುರುಷರ ತಂಡಕ್ಕೆ ಮುಖ್ಯ ಕೋಚ್ ಆಗಲು ದ್ರಾವಿಡ್ ಒಪ್ಪಿಗೆ ನೀಡಿದ್ದರು.
ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2021ರ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಾದಾಡಿದ್ದವು. ಈ ಪಂದ್ಯದಲ್ಲಿ ಸಿಎಸ್ಕೆ ನಾಲ್ಕನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಸಭೆಯಲ್ಲಿ ರಾಹುಲ್ ದ್ರಾವಿಡ್ ಭಾರತ ತಂಡಕ್ಕೆ ಕೋಚ್ ಆಗಲು ಒಪ್ಪಿಕೊಂಡಿದ್ದಾರೆ.
ರವಿ ಶಾಸ್ತ್ರಿ ಜಾಗಕ್ಕೆ ರಾಹುಲ್ ದ್ರಾವಿಡ್ ಆಯ್ಕೆ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ ಶಾ ದುಬೈನಲ್ಲಿ ಐಪಿಎಲ್ ಫೈನಲ್ ಪಂದ್ಯದ ವೇಳೆ ಸಭೆ ನಡೆಸಿ, ಟೀಮ್ ಇಂಡಿಯಾಕ್ಕೆ ನೂತನ ಕೋಚ್ ಆಗುವಂತೆ ರಾಹುಲ್ ದ್ರಾವಿಡ್ ಅವರಲ್ಲಿ ಕೋರಿಕೊಂಡಿದ್ದಾರೆ.
ಬಿಸಿಸಿಐ ಕೋರಿಕೆಗೆ ದ್ರಾವಿಡ್ ಸಮ್ಮತಿಸಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಓಮನ್ನಲ್ಲಿ ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೆ ನಡೆಯಲಿರುವ ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ದ್ರಾವಿಡ್ ಭಾರತ ಮುಖ್ಯ ಕೋಚ್ ಜವಾಬ್ದಾರಿ ಹೊರಲಿದ್ದಾರೆ.
Discussion about this post