ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣ ಅವರು ಇಂದು ಬೆಳಿಗ್ಗೆ ತುಲಾ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟಿಸಿದರು. ಬೆಳ್ಳಿರಥದಲ್ಲಿ ಅಲಂಕೃತ ಗೊಂಡಿದ್ದ ನಾಡದೇವತೆ ಚಾಮುಂಡೇಶ್ವರಿ ದೇವಿಯ ಇತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡಿ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು
ಮುಂಜಾನೆ ೫ ಗಂಟೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ಆರಂಭಗೊಂಡಿತು. ದೇವಾಲಯದ ಪ್ರಧಾನ ಅರ್ಚಕ ಡಾ. ಶಶಿ ಶೇಖರ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಿತು. ಅಗ್ರ ಪೂಜೆ ಬಳಿಕ ಪೂರ್ಣ ಕುಂಭಕಳಸದೊಂದಿಗೆ ವೇದಿಕೆಗೆ ಕರೆತಂದಿದ್ದ ದೇವಿ ಉತ್ಸವ ಮೂರ್ತಿ ಗೆ ಎಸ್. ಎಂ ಕೃಷ್ಣ ಚಾಲನೆ ನೀಡಿದ.
ಸಿಎಂ ಬಸವರಾಜ ಬೊಮ್ಮಾಯಿಯವರು, ಸಚಿವರಾದ ಎಸ್. ಟಿ. ಸೋಮಶೇಖರ್, ಅಶೋಕ್, ಸುನಿಲ್ ಕುಮಾರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Discussion about this post